ಹನೂರು ಪೊಲೀಸ ಠಾಣೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು

Bangarappa c
1 Min Read

ವರದಿ: ಮಂಜುನಾಥ .ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ಹೆಚ್ಚು ದಾಸರಾಗುತ್ತಿರುವುದರಿಂದ ಸಮಾಜದ ಘಾತುಕ ಶಕ್ತಿಗಳಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಹನೂರು ಪೋಲಿಸ್ ವೃತ್ತ ನಿರೀಕ್ಷಕರಾದ ಶ್ರೀ ಯುತ ಆನಂದ್ ಮೂರ್ತಿ ತಿಳಿಸಿದರು. ಹನೂರು ತಾಲ್ಲೂಕಿನಾದ್ಯಂತ ಪೊಲೀಸ್ ಠಾಣಾ ಸರಹದ್ದಿನ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡಲಾಯಿತು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಗ್ಗೆ ಹೆಚ್ಚಿನ ಮಟ್ಟದಲ್ಲಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಲಾಯಿತು..ಹಾಗೂ ಮಾದಕ ವ್ಯಸನಿಗಳಾಗದಂತೆ #ಮಾದಕವಸ್ತುಮುಕ್ತಸಮಾಜ ನಿರ್ಮಿಸಲು ಶ್ರಮಿಸುವಂತೆ ಪ್ರತಿಜ್ಞೆಯನ್ನು ಪಡೆದು ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಗಳು ವಿವಿಧ ಕಾಲೇಜು ಪ್ರಾಚಾರ್ಯರು ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಹಾಜರಿದ್ದರು.

Share This Article